ದಾವಣಗೆರೆ; 2022-23ನೇ ಸಾಲಿಗೆ ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಜುಲೈ.01 ರಿಂದ ಸೇವಾಸಿಂಧು ತಂತ್ರಾಂಶ (https://sevasindhu.karnataka.gov.in)ದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ 75% ಇತರೆ ಜನಾಂಗದ ವಿದ್ಯಾರ್ಥಿಗಳಿಗೆ 25% ಇದ್ದು, ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್.15 ರೊಳಗಾಗಿ ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲ್ಲೂಕು ವಿಸ್ಥರಣಾಧಿಕಾರಿಗಳ ಕಛೇರಿ ದೂರವಾಣಿ :08192-250066 ಗಳನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



