ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮುಂದಿನ 4 ದಿನ‌ ರಾಜ್ಯದಲ್ಲಿ ಭಾರಿ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದು, ಹೆಚ್ಚು ಮಳೆಯಾಗಲಿದೆ. ಜುಲೈ 8ರವರೆ ಭಾರಿ ಮಳೆಯಾಗಲಿದೆ.

ಕರ್ನಾಟಕ, ಕೇರಳ, ದೆಹಲಿ, ಉತ್ತರಾಖಂಡ್, ಬಿಹಾರ ರಾಜ್ಯಗಳಲ್ಲಿ ಅಧಿಕ ಮಳೆ ಸುರಿಯಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5 ರಿಂದ 8ರವರೆಗೆ ಅಧಿಕ ಮಳೆಯಾಗಲಿದೆ, ಜುಲೈ 5 ಹಾಗೂ 6 ರಂದು ಅತ್ಯಧಿಕ ಮಳೆ ಸುರಿಯಲಿದೆ ಎಂದು ಹೇಳಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆಯಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಧರ್ಮಸ್ಥಳ, ಬೆಳ್ತಂಗಡಿ, ಕೊಪ್ಪ, ಲಿಂಗನಮಕ್ಕಿ, ಮಾಣಿ, ಪುತ್ತೂರು, ಸಿದ್ದಾಪುರ, ಭಾಗಮಂಡಲ, ಶೃಂಗೇರಿ, ಜಯಪುರ, ಕಾರ್ಕಳ, ಬಾಳೆಹೊನ್ನೂರು, ವಿರಾಜಪೇಟೆ, ಸೋಮವಾರಪೇಟೆ, ಕೊಲ್ಲೂರು, ಮುಲ್ಕಿ, ಶಿರಾಲಿ, ಕುಮಟಾ, ಕಾರವಾರ, ಹಳಿಯಾಳ, ಪಿರಿಯಾಪಟ್ಟಣ, ಗೋಕರ್ಣ, ಬೇಲೂರು, ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದೆ.ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಜುಲೈ 8ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *