ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ (ಜು.04) 4.1ಮಿ.ಮೀ. ಸರಾಸರಿ ಮಳೆಯಾಗಿದ್ದು. 8.65 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ ಮಳೆ 4.5 ಮಿ.ಮೀ, ದಾವಣಗೆರೆ 3.2 ಮಿ.ಮೀ,, ಹರಿಹರ 9.4 ಮಿ.ಮೀ, ಹೊನ್ನಾಳಿ ಮಳೆ 4.4 ಮಿ.ಮೀ, ಜಗಳೂರು 1.8 ಮಿ.ಮೀ, ನ್ಯಾಮತಿ 4.3 ಮಿ.ಮೀ, ಮಳೆಯಾಗಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾಮನೆ ತೀವ್ರ ಹಾನಿಯಾಗಿದ್ದು ಹಾಗೂ 1 ಕಚ್ಚಾಮನೆ ಭಾಗಶ: ಹಾನಿಯಾಗಿ ಒಟ್ಟು ರೂ. 1.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1. ಲಕ್ಷ, 1 ದನದ ಕೊಟ್ಟಿಗೆ ಹಾನಿ ರೂ.0.25 ಲಕ್ಷ ಒಟ್ಟು ರೂ.1.25 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾಮನೆ ಹಾನಿಯಾಗಿದ್ದು, ಒಟ್ಟು ರೂ. 3.10 ಲಕ್ಷ ಮತ್ತು 2 ಕಚ್ಚಾಮನೆ ರೂ.3 ಲಕ್ಷ ಹಾನಿ ಸೇರಿ ಒಟ್ಟು ರೂ. 6.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ. 8.65 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.