ದಾವಣಗೆರೆ; ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನಿನ್ನೆ (ಜುಲೈ 05) ಜಿಲ್ಲೆಯಲ್ಲಿ 9.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 0.60 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.
ಸತತ ಮಳೆಯಿಂದ ಮಕ್ಕೆಜೋಳ, ಅಡಿಕೆ ಬೆಳೆಗೆ ಅನುಕೂಲವಾಗಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ. ನಿರಂತರವಾಗಿ ಮಳೆಯಾಗುತ್ತಿದ್ದರಿಂದ ಮೆಕ್ಕೆಜೋಳದಲ್ಲಿ ಎಡೆ ಹೊಡೆಯಲು ತೊಂದರೆ ಆಗುತ್ತಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ಮಳೆ 9.0 ಮಿ.ಮೀ, ದಾವಣಗೆರೆ ಮಳೆ 9.1 ಮಿ.ಮೀ, ಹರಿಹರ ಮಳೆ 8.3 ಮಿ.ಮೀ, ಹೊನ್ನಾಳಿ ಮಳೆ 10.8 ಮಿ.ಮೀ, ಜಗಳೂರು ಮಳೆ 7.1 ಮಿ.ಮೀ, ನ್ಯಾಮತಿಯಲ್ಲಿ 17.6 ಮಿ.ಮೀ ಮಳೆಯಾಗಿದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾಮನೆ ಭಾಗಶ: ಹಾನಿಯಾಗಿ ರೂ. 30 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾಮನೆ ಭಾಗಶ: ಹಾನಿಯಾಗಿ ರೂ.30 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ.60 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



