ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಉತ್ತಮ ಮಳೆಯಾಗುತ್ತಿದೆ. ನಿನ್ನೆ (ಜು.06) ಜಿಲ್ಲೆಯಲ್ಲಿ 15.6 ಮಿ.ಮೀ. ಸರಾಸರಿ ಮಳೆಯಾಗಿದೆ. ಅಂದಾಜು 13.75 ಲಕ್ಷ ರೂ. ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ 21.8 ಮಿ.ಮೀ, ದಾವಣಗೆರೆ 9.9 ಮಿ.ಮೀ, ಹರಿಹರ 10.3 ಮಿ.ಮೀ, ಹೊನ್ನಾಳಿ 19.9 ಮಿ.ಮೀ, ಜಗಳೂರು ಮಳೆ 6.7 ಮಿ.ಮೀ, ನ್ಯಾಮತಿ 33.6 ಮಿ.ಮೀ ಮಳೆಯಾಗಿದೆ.ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾಮನೆ ತೀವ್ರ ಹಾನಿಯಾಗಿದ್ದು, 1 ದನದಕೊಟ್ಟಿಗೆ ಹಾನಿಯಾಗಿ ಒಟ್ಟು ರೂ. 2.05 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ಒಟ್ಟು ರೂ.0.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಕಚ್ಚಾಮನೆ ತೀವ್ರ ಹಾನಿಯಾಗಿದ್ದು ಒಟ್ಟು ರೂ. 11 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ.13.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



