ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಗರದ ಹೊರವಲಯದಲ್ಲಿ ದಾವಣಗೆರೆ-ಹರಿಹರ ರಾಷ್ಟ್ರೀಯ ಹೆದ್ದಾರಿ ಬಳಿಯ ಶಾಮನೂರು ಶಿವಶಂಕರಪ್ಪ ಅಚರ 45 ಎಕರೆ ಜಮೀನಿನಲ್ಲಿ ನಡೆಸಲು ಮಹೋತ್ಸವ ಸಮಿತಿ ನಿರ್ಧರಿಸಿದೆ.
ಸಮಿತಿ ಪದಾಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಎರಡು ಸ್ಥಳ ಪರಿಶೀಲಿಸಿ, ಅಂತಿಮವಾಗಿ ಹೆದ್ದಾರಿಗೆ ಹೊಂದಿಕೊಂಡಿರುವ ಜಮೀನನ್ನು ಕಾರ್ಯಕ್ರಮಕ್ಕೆ ಅಂತಿಮಗೊಳಿಸಲಾಯಿತು. ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಪ್ರಥಮವಾಗಿ ನಡೆಯಲಿದ್ದು,ನಂತರ ಒಂದು ತಿಂಗಳು ವಿವಿಧ ಜಿಲ್ಲೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕೆ.ಎನ್. ರಾಜಣ್ಣ, ಪದಾಧಿಕಾರಿಗಳಾದ ಡಾ.ಹೆಚ್.ಸಿ.ಮಹಾದೇವಪ್ಪ, ಬಸವರಾಜ ರಾಯರೆಡ್ಡಿ, ಬಿ.ಎಲ್. ಶಂಕರ್, ಭೈರತಿ ಸುರೇಶ್, ಎಸ್.ಎಸ್. ಮಲ್ಲಿಕಾರ್ಜುನ್, ಡಾ. ಜಯಮಾಲಾ, ಉಮಾಶ್ರೀ, ವಿ.ಆರ್. ಸುದರ್ಶನ್, ಡಾ. ಎಲ್.ಹನುಮಂತಯ್ಯ, ಮೋಹನ್ ಕೊಂಡಜ್ಜಿ, ಹೆಚ್.ಆಂಜನೇಯ, ಅಬ್ದುಲ್ ಜಬ್ಬಾರ್, ಎಸ್. ರಾಮಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



