ನಾಳೆ ಜಿಲ್ಲಾ ಉಸ್ತುವಾರಿ ಸಚಿವ ದಾವಣಗೆರೆಗೆ ಆಗಮನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜುಲೈ.13 ರಂದು ಸಾಗರ ಮತ್ತು ನ್ಯಾಮತಿ ರಸ್ತೆಯ ಮೂಲಕ ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿ ತಲುಪುವರು. ನಂತರ ಹೊನ್ನಾಳಿಯ ಶ್ರೀಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಮಧ್ಯಾಹ್ನ 3.30ಕ್ಕೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಹಾಗೂ ಸಾರ್ವಜನಿಕರ ಭೇಟಿ ಮಾಡುವರು.

ಸಂಜೆ 6 ಗಂಟೆಗೆ ಜಯದೇವ ವೃತ್ತದಲ್ಲಿ ನಡೆಯುವ ಜಗದ್ಗುರು ಶ್ರೀಜಯದೇವ ಮುರುಘರಾಜೆಂದ್ರ ಮಹಾಸ್ವಾಮಿಗಳವರ 65ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-ಅಥಣಿ ಶಿವಯೋಗಿಗಳವರ ಲಿಂಗಕ್ಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 07 ಗಂಟೆಗೆ ರಸ್ತೆ ಮೂಲಕ ಹಿರಿಯೂರುಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಸಿ ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *