ದಾವಣಗೆರೆ: ಕುರಿ, ಮೇಕೆ ಸಾಕಾಣಿಕೆ ಮಾಡೋ ಪ್ಲ್ಯಾನ್ ಇದ್ಯಾ..? ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ…

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವಯೋಮಿತಿಯ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದು. ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಪಶುಪಾಲನಾ ಇಲಾಖೆಯ ಆಯಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆ ಇವರಿಂದ ಪಡೆದು, ಆಗಸ್ಟ್
05 ರೊಳಗಾಗಿ ನಿಗದಿತ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂರ್ಪಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *