ದಾವಣಗೆರೆ: ಭರಮಸಾಗರ ಬಳಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ಬರುತ್ತಿದ್ದ ಅಬಕಾರಿ ಇಲಾಖೆ ನಿವೃತ್ತ ಡಿವೈಎಸ್ ಪಿ ಜಯರಾಂ ನಾಯ್ಕ್ (73) ಹಾಗೂ ಅವರ ಪತ್ನಿ ಲತಾ(63) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ದಾವಣಗೆರೆ ಬರುವಾಗ ಹಿಂಬದಿಯಿಂದ ಟ್ರಕ್ ಗೆ ಕಾರು ಡಿಕ್ಕಿಯಾಗಿದೆ. ಈ ಕಾರು ದಾವಣಗೆರೆ ನೋಂದಣಿ ನಂಬರ್ ( ಕೆಎ 17 ಎಂ 8037) ಹೊಂದಿದೆ. ಇಂದು ಮಧ್ಯಾಹ್ನ 2.30ಕ್ಕೆ ಈ ಘಟನೆ ನಡೆದಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



