Connect with us

Dvgsuddi Kannada | online news portal | Kannada news online

ಭದ್ರಾ‌ ಜಲಾಶಯ ತಡೆಗೋಡೆ ಕುಸಿತ; ಸ್ಥಳ‌ ಪರಿಶೀಲಿಸಿದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ

IMG 20220719 184609

ದಾವಣಗೆರೆ

ಭದ್ರಾ‌ ಜಲಾಶಯ ತಡೆಗೋಡೆ ಕುಸಿತ; ಸ್ಥಳ‌ ಪರಿಶೀಲಿಸಿದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ

ಶಿವಮೊಗ್ಗ: ಭದ್ರಾ ಜಲಾಶಯದ ತಡೆಗೋಡೆ ಕುಸಿತದ ಮಾಹಿತಿ ಮೇರೆಗೆ ಸ್ಥಳಕ್ಕೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಜಲಾಶಯದ ತಡೆಗೋಡೆ ಕುಸಿತದ ಕಾಮಗಾರಿಗೆ ಸರಕಾರದಿಂದ 2 ಕೋಟಿ 15 ಲಕ್ಷ ರೂ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಜಲಾಶಯದ ಕ್ರಸ್ಟ್ ಗೇಟ್ ಗಳ ಮೂಲಕ ಅತಿ ಹೆಚ್ಚು ನೀರು ನದಿಗೆ ಹರಿಯುತ್ತಿರುವುದರಿಂದ ತತ್ ಕ್ಷಣ ಕಾಮಗಾರಿಯನ್ನ ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ, ಮಳೆಗಾಲ ಕಳೆದ ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಮಳೆಗಾಲದ ಸಂದರ್ಭವಾದ್ದರಿಂದ ಜಲಾಶಯ ತುಂಬಿ ಹರಿಯುತ್ತಿದ್ದು, ಆದ್ದರಿಂದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಗೋಡೆ ಕುಸಿತ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಸೂಚನಾ ಫಲಕ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಭದ್ರಾ ಜಲಾಶಯದ ಕಾರ್ಯಪಾಲಕ ಅಭಿಯಂತರರು ಶ್ರೀ ಜಗದೀಶ್ ರವರು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top