ಡಿವಿಜಿ ಸುದ್ದಿ, ಬೆಂಗಳೂರು: ಉಪಚುನಾವಣೆಯ ಕಾಂಗ್ರೆಸ್ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಹುಣಸೂರು ಮತ್ತು ಶಿವಾಜಿನಗರದಲ್ಲಿ ಮಾತ್ರ ಗೆಲುವು ದಾಖಲಿಸಿತ್ತು. ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸಿಎಲ್ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯರ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದಿದ್ದರು.
ಇಬ್ಬರ ನಾಯಕರ ನಡೆ ಅನುಸರಿಸಿರುವ ವೇಣುಗೋಪಾಲ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ರವಾನಿಸಿ, ತಮ್ಮನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



