ದಾವಣಗೆರೆ: ಹಿಂದೂ ಮಹಾ ಗಣಪತಿ ಪ್ರತಿಷ್ಠಾನದ 5ನೇ ವರ್ಷದ ಗಣೇಶ ಹಬ್ಬ ಆಚರಣೆಗೆ ಇಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಹಂದರ ಕಂಬ ಪೂಜೆ ಸಲ್ಲಿಸಲಾಯಿತು. ಶಾಸಕ ಶಾಮನೂರು ಶಿವಕರಪ್ಪ ಹಾಲು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ, ಅಜಯ್ ಕುಮಾರ್ , ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ , ಬಿಜೆಪಿ ಮುಖಂಡ ಶ್ರೀನಿವಾಸ ದಾಸಕರಿಯಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ದಿನೇಶ್ ಶಟ್ಟಿ, ಹಿಂದೂ ಮಹಾ ಗಣಪತಿ ಅಧ್ಯಕ್ಷ ಜೊಳ್ಳೇ ಗುರು, ಪದಾಧಿಕಾರಿಗಳು ಭಾಗವಹಿಸಿದ್ದರು.ಕೋವಿಡ್ ಹಿನ್ನೆಲೆ ಎರಡ್ಮೂರು ವರ್ಷದಿಂದ ಸರಳವಾಗಿ ಆಚರಿಸಲಾಗಿತ್ತು. ಈ ವರ್ಷ ಸಂಭ್ರಮದಿಂದ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ.



