ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಅಂಜನಾದ್ರಿ ಟ್ರಸ್ಟ್ ನ ಯುನಿಸನ್ ಪಬ್ಲಿಕ್ ಸ್ಕೂಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ಹುತಾತ್ಮ ಸೈನಿಕರಿಗೆ ನಮನ ಸಲ್ಲಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಹುತಾತ್ಮ ಸೈನಿಕರಿಗೆ ದೇಶ ಭಕ್ತಿ ಗೀತೆ, ನೃತ್ಯ ಮೂಲಕ ನಮನ ಸಲ್ಲಿಸಿದರು. ಪುಟ್ಟ ಪುಟ್ಟ ಮಕ್ಕಳು ಸೈನಿಕರ ಡ್ರಸ್ ಹುತಾತ್ಮರಿಗೆ ನಮಸಲ್ಲಿಸಿದ್ದು ವಿಶೇಷವಾಗಿತ್ತು. ಇದಲ್ಲದೆ, ಕಾರ್ಗಿಲ್ ವಿಜಯ ದಿವಸ್ ಕುರಿತು ವಿದ್ಯಾರ್ಥಿಗಳು ಭಾಷಣ ಮೂಲಕ ನುಡಿ ನಮನ ಸಲ್ಲಿಸಿದರು. ಈ ವೇಳೆ ಅಂಜನಾದ್ರಿ ಟ್ರಸ್ಟ್ ಅಧ್ಯಕ್ಷರಾದ ಶಾರದಮ್ಮ, ಖಜಾಂಚಿ ವಿಶ್ವನಾಥ್ ಟಿ.ಎಸ್, ಕಾರ್ಯದರ್ಶಿ ಹರೀಶ್ ಟಿ.ಕೆ, ನಿರ್ದೆಶಕ ರವಿಕುಮಾರ್ ಜಿ.ಎನ್ , ಎಸ್ ಡಿಎಂಸಿ ಅಧ್ಯಕ್ಷ ಮಾಕನೂರು ನಾಗರಾಜ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕೊಂಡಜ್ಜಿ, ಕೆಂಚನಹಳ್ಳಿ, ಬುಳ್ಳಾಪುರ ಗ್ರಾಮಸ್ಥರು ಉಪಸ್ಥಿತರಿದ್ದರು.



