ಬೊಮ್ಮಾಯಿ, ಅರುಣಕುಮಾರ ಪಂಚಮಸಾಲಿ ಮಠಕ್ಕೆ ಭೇಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹರಿಹರ: ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಅರುಣ ಕುಮಾರ ಪೂಜಾರ ಅವರು ಹರಿಹರದ ಪಂಚಮಸಾಲಿ ಮಠಕ್ಕೆ ಭೇಟಿ ನೀಡಿ  ಶ್ರೀ ವಚನಾನಂದ ಸ್ವಾಮೀಜಿಗಳ ಆರ್ಶೀವಾದ ಪಡೆದರು.

ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಬಜೆಟ್  ಸಿದ್ಧತೆಯಲ್ಲಿ ಮುಖ್ಯಮಂತ್ರಿಗಳಿದ್ದು, ಉತ್ತಮ ಆಡಳಿತದ  ನೀಡುವುದು ನಮ್ಮ ಗುರಿಯಾಗಿದೆ ಎಂದರು.

harihar panchamsali

ಇನ್ನು ವಿರೋಧ ಪಕ್ಷಗಳು ಜವಾಬ್ಧಾರಿಯುತವಾಗಿ ಕೆಲಸ ಮಾಡಲು  ಜನತೆ ಸಂದೇಶ ನೀಡಿದ್ದಾರೆ. ಸೋತಾಗ ಹಣ ತೋಳ್ಬಲ ಎಂದು ಹೇಳುವುದು ಸರ್ವೆ ಸಾಮಾನ್ಯವಾಗಿರುತ್ತದೆ. ಎಲ್ಲಾ ಶಾಸಕರಿಗೂ ಸಚಿವ ಸ್ಥಾನ‌ ನೀಡುವ ಬಗ್ಗೆ ಮುಖ್ಯಮಂತ್ರಿ ಗಳು ಹಾಗು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಡಿಯೂರಪ್ಪ‌ ಈಗಾಗಲೇ ಹೈಕಮಾಂಡ್ ಜೊತೆ ಸಂಪರ್ಕದಲ್ಲಿದ್ದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಈ ಸಂಧರ್ಭದಲ್ಲಿ ಶ್ರೀ ಪೀಠದ ಧರ್ಮದರ್ಶಿ ಬಿ.ಸಿ.ಉಮಾಪತಿ,  ಚಂದ್ರಶೇಖರ ಪೂಜಾರ ಹಾಗೂ ಕರಿಬಸಪ್ಪರವರು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *