Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಾಯ

bla

ಚನ್ನಗಿರಿ

ದಾವಣಗೆರೆ: ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಾಯ

ಚನ್ನಗಿರಿ: ತಾಲ್ಲೂಕಿನ ಹೊಸ ಬನ್ನಿಹಟ್ಟಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ.

ಗ್ರಾಮದ ವೀಣಾ ನಾಗರಾಜಪ್ಪ ಅವರ ಮನೆಯಲ್ಲಿ ಬೆಳಿಗ್ಗೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ಭೀಕರತೆಗೆ ಮನೆಯ
ಹೆಂಚುಗಳು ಹಾರಿ ಹೋಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ.

ವೀಣಾ ನಾಗರಾಜಪ್ಪ ಹಾಗೂ ಪಕ್ಕದ ಮನೆಯ ವೀರಭದ್ರಪ್ಪ ಅವರ ತಲೆಯ ಮೇಲೆ ಹೆಂಚುಗಳು ಬಿದ್ದಿವೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪ್ರಕೃತಿ ವಿಕೋಪ ಪರಿಹಾರ ಯೋಜನೆ ಅಡಿ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ, ಗಾಯಾಳುಗಳಿಗೆ ಪರಿಹಾರ ಕೊಡಿಸುವುದಾಗಿ ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top