ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 75ನೇ ಜನ್ಮ ದಿನದ ಹಿನ್ನೆಲೆ ನಗರದ ಹೊರ ವಲಯದ ಎಸ್.ಎಸ್. ಪ್ಯಾಲೇಸ್ ಮೈದಾನದಲ್ಲಿ ಆಯೋಜಿಸಿರುವ ಅಮೃತ ಮಹೋತ್ಸವ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ, ಸಿದ್ದರಾಮಯ್ಯ ಅವರು ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಅಭಿಮಾನಿಗಳ ಜತೆ ದೇವಸ್ಥಾನ ಕ್ಕೆ ಆಗಮಿಸಿದ ಸಿದ್ದರಾಮಯ್ಯ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದಾವಣಗೆರೆ ದುರ್ಗಾಂಬಿಕಾ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತೆರೆದ ವಾಹನದಲ್ಲಿ ಕಾರ್ಯಕ್ರಮ ನಢಯುವ ಎಸ್.ಎಸ್. ಶಾಮನೂರು ಪ್ಯಾಲೇಸ್ ಮೈದಾನಕ್ಕೆ ತೆರಳಿದರು.
ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನರು ಸಿದ್ದರಾಮಯ್ಯ ಅವರಿಗೆ ಶುಭ ಕೋರಿದರು. ದುರ್ಗಾಂಬಿಕಾ ದೇವಸ್ಥಾನ ನಂತರ ಪಕ್ಕದಲ್ಲಿ ಇರುವಂತಹ ಷಾವಲಿ ದರ್ಗಾಕ್ಕೂ ಭೇಟಿ ನೀಡಿದರು.



