ಡಿವಿಜಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್, ಕಾಂಗ್ರೆಸ್ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ಬುಲಾವ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹೈಕಮಾಂಡ್ ಡಿಕೆಶಿ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ಕೆಪಿಸಿಸಿ ಬದಲಾವಣೆಯ ಮುನ್ಸೂಚನೆ ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿರುವ ಡಿ.ಕೆ.ಶಿವಕುಮಾರ್ ಸದ್ಯಕ್ಕೆ ಆ ಸ್ಥಾನಮಾನ ಬೇಡ ಎಂದು ಅಂತರ ಕಾಯ್ದುಕೊಂಡಿದ್ದರು. ಆದರೆ, ಹೈಕಮಾಂಡ್ ಬುಲಾವ್ ಹಿನ್ನೆಲೆ ಡಿಕೆಶಿ ಸಂಜೆ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ ಎನ್ನುವ ಮಾಹಿತಿ ಇದೆ.
ಹೈಕಮಾಂಡ್ ಕೆಪಿಸಿಸಿ ಪಟ್ಟಕ್ಕೆ ಡಿಕೆಶಿ ಹೆಸರು ಬಹುತೇಕ ಅಂತಿಮ ಪಡಿಸುವ ತೀರ್ಮಾನಕ್ಕೆ ಬಂದಿದ್ದು, ಆದರೆ, ಡಿಕೆಶಿ ಇದಕ್ಕೆ ಒಪ್ಪಿಕೊಳ್ಳುತ್ತಾರಾ? ಅನ್ನೋ ಕುತೂಹಲ ಮೂಡಿಸಿದೆ.



