Connect with us

Dvgsuddi Kannada | online news portal | Kannada news online

ಪ್ರತಿ ಮಗುವಿನ ಭವಿಷ್ಯವೂ ಮುಖ್ಯ: ರಿಜ್ವಾನ್‌ ಅರ್ಷದ್‌

IMG 20220808 WA0001

ಪ್ರಮುಖ ಸುದ್ದಿ

ಪ್ರತಿ ಮಗುವಿನ ಭವಿಷ್ಯವೂ ಮುಖ್ಯ: ರಿಜ್ವಾನ್‌ ಅರ್ಷದ್‌

ಬೆಂಗಳೂರು: ಶಿವಾಜಿನಗರ ಶಾಸಕ ರಿಜ್ವಾನ್‌ ಅರ್ಷದ್‌ ಅವರು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ತಮ್ಮ ಕ್ಷೇತ್ರದ ಮಕ್ಕಳಿಗೆ ಭಾನುವಾರ ಪ್ರತಿಭಾ ಪುರಸ್ಕಾರ ಮಾಡಿದರು.

ವಸಂತನಗರದ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ 830ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಅವರನ್ನು ಪ್ರೋತ್ಸಾಹಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ರಿಜ್ವಾನ್‌ ಅರ್ಷದ್‌ ಅವರು ಪ್ರತಿ ಮಗುವಿನ ಭವಿಷ್ಯವೂ ಮುಖ್ಯ. ಶ್ರಮ, ಆಸಕ್ತಿ ಮತ್ತು ಶ್ರದ್ಧೆಯು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ. ಇಂತಹ ಮಕ್ಕಳನ್ನು ಪ್ರೋತ್ಸಾಹಿಸಲು ನಾವು ಒಂದು ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಪೊಲೀಸ್‌ ಅಧಿಕಾರಿ ಭೀಮಾಶಂಕರ್‌ ಎಸ್‌. ಗುಳೇದ್‌ ಅವರು ಮಾತನಾಡಿ, ಶಿಕ್ಷಣವು ಸಮಾಜದ ಎಲ್ಲ ಸಮಸ್ಯೆಗಳಿಗೆ ಸೂಕ್ತ ಉತ್ತರವಾಗಿದೆ ಎಂದು ತಿಳಿಸಿದರು.

ಕಲಿಯಲು ಅವಕಾಶ ಸಿಕ್ಕರೆ ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು. ಮಕ್ಕಳಿಗೆ ಸೂಕ್ತ ವೇದಿಕೆ ಸಿಕ್ಕರೆ ಅವರು ಅದ್ಭುತವಾಗಿ ಸಾಧನೆ ಮಾಡುತ್ತಾರೆ. ಅಂತಹ ಮಕ್ಕಳಿಗೆ ಇಂಥ ಕಾರ್ಯಕ್ರಮಗಳ ಮೂಲಕ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಇನ್ವೆಂಚರ್‌ ಅಕಾಡೆಮಿಯ ಸಹ ಸಂಸ್ಥಾಪಕ ನೂರೇನ್‌ ಫಾಜಲ್‌ ಅವರು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top