ದಾವಣಗೆರೆ: ಪ್ರಗತಿಪರ ರೈತರಿಗೆ ಸಿಹಿ ಸುದ್ದಿ; ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: 2022-23ನೇ ಸಾಲಿನ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಜಿಲ್ಲಾ ಮಟ್ಟಕ್ಕೆ ಮುಸುಕಿನಜೋಳ (ಮಳೆಯಾಶ್ರಿತ) ಬೆಳೆಯನ್ನು ನಿಗಧಿಪಡಿಸಲಾಗಿದೆ.

ತಾಲ್ಲೂಕು ಮಟ್ಟಕ್ಕೆ ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕುಗಳಿಗೆ ಭತ್ತ (ನೀರಾವರಿ) ಮತ್ತು ನ್ಯಾಮತಿ ತಾಲ್ಲೂಕಿಗೆ ಶೇಂಗಾ (ಮಳೆಯಾಶ್ರಿತ) ಹಾಗೂ ಜಗಳೂರು ತಾಲ್ಲೂಕಿಗೆ ಮುಸುಕಿನಜೋಳ (ಮಳೆಯಾಶ್ರಿತ) ಬೆಳೆಗಳನ್ನು ನಿಗಧಿಪಡಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿಗೆ ಆಗಸ್ಟ್ 31 ಹಾಗೂ ಹಿಂಗಾರು ಹಂಗಾಮಿಗೆ ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿಗೆ ಪ್ರತ್ಯೇಕವಾಗಿ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಕೂಡಲೇ ರೈತ ಬಾಂಧವರು ನಿಗಧಿತ ದಿನಾಂಕದೊಳಗೆ ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *