ಹರಿಹರ: ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ದಾವಣಗೆರೆಗೆ ಬಂದಿದ್ದ ಮಂಡ್ಯದ ಪಾಂಡವಪುರ ತಾಲ್ಲೂಕು ಅರಳಕುಪ್ಪೆ ಗ್ರಾಮದ ವೃದ್ಧ ಸ್ವಾಮಿಗೌಡ (73) ಹರಿಹರ ಬೈಪಾಸ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಅಮೃತ ಮಹೋತ್ಸವ ಮುಗಿಸಿ ಪಾಂಡವಪುರಕ್ಕೆ ವಾಪಸ್ ಬರುವ ವೇಳೆ ಸ್ವಾಮಿಗೌಡ ಬಸ್ ತಪ್ಪಿಸಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಬಸ್ಗಾಗಿ ಹುಡುಕಾಡುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ವಾಮಿಗೌಡ ನಾಪತ್ತೆ ಬಗ್ಗೆ ಕುಟುಂಬ ಸದಸ್ಯರು ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ಸಿದ್ದರಾಮಯ್ಯ ಜನ್ಮದಿನಕ್ಕೆ ತೆರಳಿದ್ದ ಮಾಹಿತಿಯನ್ನೂ ಪೊಲೀಸರಿಗೆ ನೀಡಿದ್ದರು. ಹರಿಹರ ಪೊಲೀಸರು ಕಳುಹಿಸಿದ್ದ ಭಾವಚಿತ್ರವನ್ನು ಸ್ವಾಮಿಗೌಡರ ಕುಟುಂಬ ಸದಸ್ಯರು ಪತ್ತೆ ನಂತರ ಪ್ರಕರಣ ಬೆಳಕಿಗೆ ಬಂದಿದೆ.



