ಕಸಪಾದಿಂದ ನಾಳೆ ದತ್ತಿ ಉಪನ್ಯಾಸ ಕಾರ್ಯಕ್ರಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ದಾವಣಗೆರೆ ಹಾಗೂ ಎ.ಆರ್.ಜಿ. ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಶಾಲಾ-ಕಾಲೇಜು ಸಾಹಿತ್ಯೋತ್ಸವ ಅಂಗವಾಗಿ ನಾಳೆ (ಡಿ.13) ದತ್ತಿ ಉಪನ್ಯಾಸ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ   ಎ.ಆರ್.ಜಿ. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು  ಬಾಪೂಜಿ ತಾಂತ್ರಿಕ  ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ   ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು  ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಎಸ್.ಎಸ್. ಬಸವರಾಜಪ್ಪನವರು ವಹಿಸಲಿದ್ದಾರೆ.

ಕನ್ನಡ ಮತ್ತು ಸೃಜನಶೀಲತೆ ವಿಷಯವನ್ನು  ಕುರಿತು  ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಡಾ. ದಾದಾಪೀರ್ ನವಿಲೇಹಾಳ್ ಅವರು ಉಪನ್ಯಾಸ ನೀಡುವರು.  ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಅವರು ಆಶಯ ನುಡಿಗಳನ್ನಾಡಲಿದ್ದು, ಎ.ಆರ್.ಜಿ. ಪದವಿ ಪೂರ್ವ ಕಾಲೇಜಿನ  ಪ್ರಾಂಶುಪಾಲ ಕೆ. ಬೊಮಣ್ಣನವರು ಕನ್ನಡದಲ್ಲಿ  ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದತ್ತಿ ದಾನಿಗಳಾದ ಪ್ರೊ. ವೈ. ವೃಷಭೇಂದ್ರಪ್ಪ,  ಆರ್. ಸುಧಾ, ಡಾ. ಜಿ.ಬಿ. ರಾಜ್,  ಪುಷ್ಪ ದಿನೇಶ್,  ಗೀತಾ ದಿನೇಶ್,  ಜಿ.ಕೆ. ದಿನೇಶ್ ಮತ್ತು ಮಕ್ಕಳು ಇವರು ಉಪಸ್ಥಿತರಿರುವರು.

ಡಿ. 14 ರಂದು ಡಿಆರ್ ಎಂ ಕಾಲೇಜಿನಲ್ಲಿ ದತ್ತಿ ಉಪನ್ಯಾಸ

ಇನ್ನುಡಿ. 14 ರಂದು  ಬೆಳಿಗ್ಗೆ 10.30 ಕ್ಕೆ  ನಗರದ ಡಿಆರ್ ಎಂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಜಿಲ್ಲಾ  ಕ.ಸಾ.ಪ. ಜಿಲ್ಲಾಧ್ಯಕ್ಷ  ಡಾ. ಹೆಚ್.ಎಸ್. ಮಂಜುನಾಥ ಕುರ್ಕಿಯವರು  ಕಾರ್ಯಕ್ರಮದ ಉದ್ಘಾಟಿಸಲಿದ್ದು, ಡಿಆರ್ ಎಂ ಕಾಲೇಜು ಪ್ರಾಚಾರ್ಯ  ಡಾ. ಎಸ್.ಆರ್. ಗೋಪಾಲಕೃಷ್ಣ ನಾಯಕ್ ಅವರು  ಅಧ್ಯಕ್ಷತೆ ವಹಿಸಲಿದ್ದಾರೆ.

ವಚನ ಸಾಹಿತ್ಯದಲ್ಲಿ ಸಾಮಾಜಿಕ ಮೌಲ್ಯಗಳು ವಿಷಯವನ್ನು ಕುರಿತು  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಎಂ. ಮಂಜಣ್ಣ ಉಪನ್ಯಾಸ ನೀಡುವರು.  ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ ಬಿ.ವಾಮದೇವಪ್ಪ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ಧಾರೆ. ದತ್ತಿ ದಾನಿಗಳಾದ  ಚೇತನ, ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ,   ಅನಿತಾ ಮತ್ತು ಡಾ. ಮಲ್ಲಿಕಾರ್ಜುನ ಹಲಸಂಗಿ, ಶ್ರೀಮತಿ ಹೇಮಲತಾ, ಕೆ.ಜಿ. ವೇದಮೂರ್ತಿ ಉಪಸ್ಥಿತರಿರುವರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *