ಅಖಿಲ ಭಾರತ ವಕೀಲರ ಸಂಘ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ,ಸುದ್ದಿ, ದಾವಣಗೆರೆ:  ಅಖಿಲ ಭಾರತ ವಕೀಲರ ಸಂಘದ 8ನೇ  ರಾಜ್ಯ ಸಮ್ಮೇಳನದ ಪೋಸ್ಟರ್‌ ಅನ್ನು  ಅಖಿಲ ಭಾರತ ವಕೀಲರ ಸಂಘದ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಎಲ್.ಹೆಚ್.ಅರುಣ್ ಕುಮಾರ್ ಮತ್ತು  ಪೀಪಲ್ಸ್ ಲಾಯರ್ಸ್  ಗಿಲ್ಡ್  ಅಧ್ಯಕ್ಷ  ಅನೀಸ್ ಪಾಷಾ ಅವರ  ಬಿಡುಗಡೆಗೊಳಿಸಿದರು.

ಈ  ಸಂದರ್ಭದಲ್ಲಿ  ಮಾತನಾಡಿದ  ನ್ಯಾಯವಾದಿ ಎಲ್.ಹೆಚ್. ಅರುಣ್ ಕುಮಾರ್ ಅವರು, ಅಖಿಲ ಭಾರತ ವಕೀಲರ ಸಂಘದ  ರಾಜ್ಯ ಸಮ್ಮೇಳನ ಡಿ.14 ಮತ್ತು 15 ರಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ  ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಸಮ್ಮೇಳನವನ್ನು ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ  ಉದ್ಘಾಟಿಸಲಿದ್ದಾರೆ. ಅಖಿಲ ಭಾರತ  ವಕೀಲರ  ಸಂಘವು ದೇಶದಲ್ಲಿ  ಬಹುದೊಡ್ಡ   ಸಂಘಟನೆಯಾಗಿದ್ದು,  ವಕೀಲರ ಹಿತರಕ್ಷಣೆಗಾಗಿ ಪರಿಣಾಮಕಾರಿಯಾಗಿ ಶ್ರಮಿಸುತ್ತಿದೆ. ಸಮ್ಮೇಳನದಲ್ಲಿ  ವಕೀಲರ ಹಲವು ಬೇಡಿಕೆಗಳನ್ನು  ಮಂಡಿಸಲಾಗುವುದು ಎಂದು ತಿಳಿಸಿದರು.

ಪ್ರಮುಖವಾಗಿ ದೇಶಾದ್ಯಂತ  ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ ಹಾಗೂ ದೌರ್ಜನ್ಯ ತಡೆಗಟ್ಟಲು  ಕೇಂದ್ರ ಹಾಗೂ  ರಾಜ್ಯ ಸರ್ಕಾರಗಳು ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಪೀಪಲ್ಸ್ ‍ಲಾಯರ್ಸ್ ಗಿಲ್ಡ್  ಅಧ್ಯಕ್ಷ , ನ್ಯಾಯವಾದಿ ಅನೀಸ್ ಪಾಷಾ  ಮಾತನಾಡಿ,ವಕೀಲರ ಹಿತರಕ್ಷಣೆಗಾಗಿ   ಕೇಂದ್ರ  ಮತ್ತು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಲು ಹಾಗೂ  ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾ  ವಕೀಲರ ಸಂಘಗಳಿಗೆ 10 ಲಕ್ಷ , ತಾಲ್ಲೂಕು ಕೇಂದ್ರಗಳಲ್ಲಿರುವ ತಾಲ್ಲೂಕು   ವಕೀಲರ ಸಂಘಗಳಿಗೆ 5 ಲಕ್ಷ ರೂ. ವಾರ್ಷಿಕ ಅನುದಾನವನ್ನು  ಸರ್ಕಾರಗಳು ಒದಗಿಸಲು ಒತ್ತಾಯಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಕೀಲರುಗಳು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ವಿನಂತಿಸಿದರು.ಈ  ಸಂದರ್ಭದಲ್ಲಿ  ವಕೀಲರುಗಳಾದ ಕೆ. ಮಂಜುಳಾ, ಜ್ಯೋತಿ ಲಕ್ಷ್ಮೀ,  ಜಸ್ಟಿನ್ ಜಯಕುಮಾರ್, ಸಿರಾಜುದ್ದೀನ್, ಉಷಾ ಕೈಲಾಸದ್, ಸುಧಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *