ಶಿವಮೊಗ್ಗ: ಕಾರ್ತಿಕ ಮಾಸದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ. ಮತಾಂಧತೆಯಿಂದಾಗಿ ಧಾರ್ಮಿಕ ಸಂರ್ಷಗಳು ನಡೆಯುತ್ತಿದ್ದು, ನೈಜ ಜ್ಞಾನದ ಕೊರತೆಯೇ ಕಾರಣ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಮಾತನಾಡಿದ ಅವರು,ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ.ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದರು.



