ದಾವಣಗೆರೆ: ಪ್ರೇಮಿಗಳಿಬ್ಬರು ಒಟ್ಟಿಗೆ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಬಳಿಯ ಕೆರೆಯಲ್ಲಿ ನಡೆದಿದೆ.
ಬೆಂಗಳೂರಲ್ಲಿ ವಿವಾಹವಾಗ ನೆಲೆಸಿದ್ದ ನಾಗರತ್ನ (21) ಪ್ರೀತಿಸಿದ ಯುವಕ ಚರಣ್ ನೊಂದಿಗೆ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಯುವಕ-ಯುವತಿ ಕೆರೆಯ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದರು. ಇಂದು ಇಬ್ಬರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇಬ್ಬರ ಮೃತದೇಹಗಳನ್ನ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆಯೇ ನಾಗರತ್ನ, ಪ್ರಸನ್ನ ಕುಮಾರ್ ಎಂಬವರ ಜತೆ ವಿವಾಹ ನಡೆದಿತ್ತು ಎನ್ನಲಾಗಿದೆ. ಇನ್ನು ಕಳೆದ ಎರಡು ದಿನಗಳ ಹಿಂದೆ ನಾಗರತ್ನ ನಾಪತ್ತೆಯಾಗಿದ್ದರು. ಈ ಬಗ್ಗೆ ಗಂಡ ಪ್ರಸನ್ನ ಕುಮಾರ್ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.



