ಡಿವಿಜಿ ಸುದ್ದಿ, ದಾವಣಗೆರೆ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ದಾವಣಗೆರೆಯ ಕುರುಬರ ಯುವ ಘಟಕದಿಂದ ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿ ಹೊಡೆಯಲಾಯಿತು.

ಸಿದ್ದರಾಮಯ್ಯನವರಿಗೆ ಆ್ಯಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆ ಮಾಡಿದ್ದು, ಸದ್ಯ ಸ್ಟೆಂಟ್ ಅಳವಡಿಸಿದ್ದು ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಮುಖ್ಯಮಂತ್ರಿಯಾಗಿ ಸಾಕಷ್ಟು ಉತ್ತಮ ಕೆಲಸ ನಿರ್ವಹಿಸಿದ ಸಿದ್ದರಾಮಯ್ಯ ಆದಷ್ಟು ಬೇಗ ಗುಣ ಮುಖರಾಗಲಿ ಎಂದು ಸಿದ್ದರಾಮಯ್ಯ ಅಭಿಮಾನಿ ಲಿಂಗರಾಜ್ ನೇತೃತ್ವದಲ್ಲಿ ಕುರುಬ ಸಮಾಜದ ಬಂಧುಗಳು, ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.




