ದಾವಣಗೆರೆ: ಕೌಶಲ್ಯ ಸ್ಫೂರ್ತಿಯಡಿ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ (District Collector Shadowing) ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಹರಿಹರ ತಾಲ್ಲೂಕಿನ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಲಕ್ಷ್ಮೀ.ಎಂ.ಪಿ ಆಯ್ಕೆ ಆಗಿದ್ದಾರೆ.
ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಅಡಿಯಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಿನ್ನಲೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪದವಿಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜು.15 ರಂದು ಆಚರಿಸಲಾಗಿತ್ತು. ಜಿಲ್ಲೆಯಿಂದ ಒಟ್ಟು 24 ವಿದ್ಯಾರ್ಥಿಗಳು ಭಾಗವಹಿಸಿದ್ದು, ಲಕ್ಷ್ಮೀ ವಿಜೇತರಾಗಿರುತ್ತಾರೆ.
ಯುವಜನತೆ ವೃತ್ತಿ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಮಹತ್ವನ್ನು ತಿಳಿಯಪಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಜಿಲ್ಲಾಡಳಿತವು ಲಕ್ಷ್ಮೀ.ಎಂ.ಪಿ ಅವರಿಗೆ ಅಭಿನಂದನೆ ಸಲ್ಲಿಸಿದೆ.



