ದಾವಣಗೆರೆ: ಜಿಲ್ಲೆಯ ಹಳೇಬಾತಿ ಬಳಿ ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಕನ್ನಿಕಾ ಸಿಕ್ರಿವಾಲ್ ಅವರು ಸಿಬ್ಬಂದಿಗಳೊಂದಿಗೆ ದಾವಣಗೆರೆ ತಾಲ್ಲೂಕಿನ ಹಳೇಬಾತಿ ಗ್ರಾಮದ ಹತ್ತಿರ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ತಿಪ್ಪಣ್ಣ ನಾಟೇಕರ್( 56 ವರ್ಷ, ಯಾದಗಿರಿ ಜಿಲ್ಲೆ) ಮೇಲೆ ದಾಳಿ ನಡೆಸಿ 20,000 ರೂ. ಬೆಲೆಯ 600 ಗ್ರಾಂ ತೂಕದ ಗಾಂಜಾ ಒಣಗಿದ ಸೊಪ್ಪನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿದೆ.
ದಾಳಿಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕಿ ಕನ್ನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ ಪಿಐ ಲಿಂಗನಗೌಡ ನೇಗಳೂರು, ಪಿಎಸ್ ಐ ಹಾರೂನ್ ಆರ್, ಯಾಸೀನುಲ್ಲಾ ,ಸೈಯದ್ ಗಫಾರ್, ನಾಗರಾಜಯ್ಯ, ತಿಮ್ಮಪ್ಪ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲಾ ಅಧಿಕಾರಿ, ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಅಧೀಕ್ಷಕ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



