ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಲಹೆಗಾರ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮುಗಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ .ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರನಾಗಿ ಕೆಲಸ ಮಾಡುತ್ತಿದ್ದರು.ಇದಕ್ಕೂ ಮುನ್ನ ಕನ್ನಡದ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು. ಆಕಾಲಿಕ ಸಾವು ಕನ್ನಡ ಮಾಧ್ಯಮ ಮಿತ್ರರು ಕಂಬನಿ ಮಿಡಿದಿದ್ದಾರೆ.



