ಬಸ್ – ಕ್ರೂಜರ್ ಕಾರು ನಡುವೆ ಭೀಕರ ಅಪಘಾತ; ಮೂವರು ಸಾವು..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಜರ್​ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿವೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳಾಗಿದ್ದು,ಇವರು ಹುಬ್ಬಳ್ಳಿಗೆ ಮೃತ ದೇಹವನ್ನು ತರಲು ಹುಬ್ಬಳಿಗೆ ಹೊರಟಿದ್ದರು. ಕಲಘಟಗಿಯ ರಾಯನಾಳ ಬಳಿ ಖಾಸಗಿ ಬಸ್ ಗೆ ಡಿಕ್ಕಿಯಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದರು. ಆಸ್ಪತ್ರೆಯಲ್ಲಿ ಕ್ರೂಜರ್ ಚಾಲಕ ಮಾರುತಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿಯೇ ಮೃತಪಟ್ಟವರನ್ನು ಶಿವನಗೌಡ ಮತ್ತು ಅಮೃತ ಎಂದು ಗುರುತಿಸಲಾಗಿದೆ. ಕ್ರೂಜರ್ ನಲ್ಲಿ ಒಟ್ಟು 5 ಜನರು ಪ್ರಯಾಣಿಸುತ್ತಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *