ಪಿಎಸ್ ಐ ನೇಮಕಾತಿ ಹಗರಣ: ಪ್ರಥಮ ರ‍್ಯಾಂಕ್ ಪಡೆದ ರಚನಾ‌ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಕೈಗೊಂಡ ಸಿಐಡಿ, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿಸಿದೆ.

ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌

ರಚನಾಗಾಗಿ ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದ್ದರೂ ಹಾಗೂ ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದರೂ ರಚನಾ ಕೈಗೆ ಸಿಕ್ಕಿರಲಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ತಲೆ ಮರೆಸಿಕೊಂಡು ಓಡಾಟ ಮಾಡುತ್ತಿರುವುದನ್ನು ಗಮನಿಸಿ ಬಂಧಿಸಲಾಗಿದೆ.‌

ಮಹಾರಾಷ್ಟ್ರ-ಕರ್ನಾಟಕ ಗಡಿ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಬಂಧಿಸಲಾಗಿದೆ. ಕಳೆದ ಒಂದುವರೆ ತಿಂಗಳಿಂದ ಕಲಬುರಗಿ ಸಿಐಡಿ ಅಧಿಕಾರಿಗಳು ಬೆಲೆ‌ ಬೀಸಿದ್ದರು. ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಐಡಿ ತಂಡ ರಚನಾಳನ್ನು ಬಂಧಿಸಿ ಕಲಬುರಗಿ 5 ನೇ ಜೆ ಎಂಎಫ್ ಸಿ ಕೋರ್ಟ್ ನ್ಯಾಯಾಧೀಶರ ಮುಂದೆ ರಚನಾಳನ್ನು ಹಾಜರುಪಡಿಸಲಾಗೊದ್ದು, ನಂತರ ಕಲಬುರಗಿಯಿಂದ ಬೆಂಗಳೂರು ಪೊಲೀಸರ ವಶಕ್ಕೆ ನೀಡಲಾಗುತ್ತಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *