ಪವರ್ ಸ್ಟಾರ್ ಪುನೀತ್ ಬಿಎಂಟಿಸಿ ರಾಯಭಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು:  ನಗರದ ಕೆ.ಆರ್.ಪುರಂ ನಿಂದ ವೈಟ್‍ಫೀಲ್ಡ್ ವರೆಗೆ ಆರಂಭಗೊಂಡಿರುವ ಬಸ್ ಪ್ರಿಯಾರಿಟಿ ಲೇನ್ ಹಾಗೂ ಬಿಎಂಟಿಸಿಗೆ ನೂತನ ಅಂಬಾಸಿಡರ್ ಆಗಿ  ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಆಯ್ಕೆ ಮಾಡಲಾಗಿದೆ.

ರಾಯಭಾರಿಯಾಗುವಂತೆ ಬಿಎಂಟಿಸಿಯ ಅಧ್ಯಕ್ಷ ನಂದೀಶ್ ರೆಡ್ಡಿ ಅವರ  ಮನವಿಗೆ ಪುನೀತ್ ರಾಜ್‍ಕುಮಾರ್ ಒಪ್ಪಿ ನೀಡಿದ್ದಾರೆ. ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸರ ಜಂಟಿ ಸಹಯೋಗದ ಮಹತ್ವಾಕಾಂಕ್ಷಿಯ ಪ್ರತ್ಯೇಕ ಬಸ್ ಪಥ (ಬಸ್ ಪ್ರಿಯಾರಿಟಿ ಲೇನ್).  ಈ ಪಥ ಅಷ್ಟು ಜನಪ್ರಿಯವಾಗಿಲ್ಲ. ಈ ಬಗ್ಗೆ ಫೇಸ್ ಬುಕ್ ಹಾಗೂ ವಾಟ್ಸಾಪ್‍ಗಳಲ್ಲಿ ಬಿಎಂಟಿಸಿಯಿಂದ ಜಾಹೀರಾತುಗಳನ್ನು ಮಾಡಿ ಪ್ರಚಾರ ಮಾಡಲಾಗುತ್ತಿತ್ತು. ಇದೀಗ ಬಿಎಂಟಿಸಿ ಬ್ರಾಂಡ್ ಅಂಬಾಸಿಡರ್ ಆಗಲು ಪುನೀತ್ ಯಾವುದೇ ಸಂಭಾವನೆಯನ್ನು ಪಡೆಯದೆ ಒಪ್ಪಿಗೆ ನೀಡಿರುವುದು ವಿಶೇಷವಾಗಿದೆ.

ಈ ಬಗ್ಗೆ ಮಾತನಾಡಿದ ನಂದೀಶ್ ರೆಡ್ಡಿ,  ಪುನೀತ್ ಒಪ್ಪಿಗೆ ನೀಡಿದ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಈ ವೇಳೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಕಾ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಅನುಪಮ್ ಅಗ್ರವಾಲ್ ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *