ದಾವಣಗೆರೆ: ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಬಿ.ಆರ್. ಹರ್ಷ ಹೃದಯಾಘಾತದಿಂದ ಇಂದು (ಆ.30) ನಿಧನ ಹೊಂದಿದ್ದಾರೆ.
ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಡಾ. ಬಿ.ಆರ್. ಹರ್ಷ ಅವರು, ಎರಡು ತಿಂಗಳಿಂದಷ್ಟೇ ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ದಾವಣಗೆರೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ ಕೆಲಸ ಮಾಡಿದ್ದರು.
ಹರ್ಷ ಅವರ ಪತ್ನಿ ಡಾ. ಮಧುಮಾಲ ಸಹ ಸೇನೆಯಲ್ಲಿ ಕೆಲಸ ನಿರ್ವಹಿಸಿದ್ದರು. ಇಬ್ಬರು ಹೆಣ್ಣುಮಕ್ಕಳು ಅಪಾರ ಬಂಧು ಬಳಗ ಅಗಲಿದ್ದಾರೆ. ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದಲ್ಲಿ ನಾಳೆ (ಬುಧವಾರ) ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.



