ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದ ಹತ್ತಿರ ಪೊಲೀಸ್ ಉಪ ನಿರೀಕ್ಷಕರವರು ಜಪ್ತಿ ಮಾಡಿಕೊಳ್ಳಲಾದ 5.85 ಕೆ.ಜಿ ಕ್ವಿಂಟಾಲ್ ಅಕ್ಕಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆ.12 ರಂದು ದಾವಣಗೆರೆ ಎಪಿಎಂಸಿ ಕಚೇರಿ ಹಿಂಭಾಗದ ಟಿ.ಎ.ಪಿ.ಸಿ.ಎಂ.ಎಸ್(ಲಿ.) ಗ್ರಾಮಾಂತರ ಸಗಟು ಮಳಿಗೆ,ಎಪಿಎಂಸಿ ಯಾರ್ಡ್, ಡಿ-ಬ್ಲಾಕ್, ಎ.ಆರ್.ಸಿ ಗೋದಾಮು ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು.ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ.10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ಠೇವಣಿ ಇಡದವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಸರ್ಕಾರಕ್ಕೆ ಜಪ್ತಿ ಮಾಡಲಾದ 5.85 ಕ್ವಿಂಟಾಲ್ ಅಕ್ಕಿಯನ್ನು ಇದ್ದ ಸ್ಥಿತಿಯಲ್ಲಿಯೇ ಹರಾಜು ಮಾಡಲಾಗುವುದು. ಬಿಡ್ಡುದಾರರು ತಕ್ಷಣವೇ ಪೂರ್ಣ ಹಣವನ್ನು ಸರ್ಕಾರಕ್ಕೆ ಪಾವತಿ ಮಾಡತಕ್ಕದ್ದು ಮತ್ತು ಅದೇ ದಿನ ವಸ್ತುಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ತೆಗೆದುಕೊಂಡು ಹೋಗಬೇಕು. ಹರಾಜಿನಲ್ಲಿ ಇಲಾಖೆಯವರ ತೀರ್ಮಾನವೇ ಅಂತಿಮವಾಗಿರುತ್ತದೆ. ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್ನೊಂದಿಗೆ ಹಾಜರಾಗಬಹುದಾಗಿದೆ ಎಂದು ತಹಶೀಲ್ದಾರ್ ಬಸವನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



