ದಾವಣಗೆರೆ: ತುಂಗಾಭದ್ರ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಇಬ್ಬರು ಸಹೋದರಿಯರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ.
ಉಕ್ಕಡಗಾತ್ರಿ ಅಜ್ಜಯನ ದರ್ಶನಕ್ಕೆ ಬಂದಿದ್ದ ದಾವಣಗೆರೆ ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದ ಸಹೋದರಿಯರು ತುಂಗಭದ್ರ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಈಜು ಬಾರದೇ ಇಬ್ಬರು ಸಹೋದರಿಯರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಚೈತ್ರಾ (19), ಪುಷ್ಪಾ (17) ಎಂಬುವರು ಮೃತಪಟ್ಟಿದ್ದಾರೆ.
ಚೈತ್ರಾ ಅವರಿಗೆ ವಿವಾಹವಾಗಿತ್ತು. ಪುಷ್ಪಾ ದಾವಣಗೆರೆ ಪಿಯುಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



