Connect with us

Dvgsuddi Kannada | online news portal | Kannada news online

ಹರಿಹರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಮಚ್ಚು ಪ್ರದರ್ಶಿಸಿದ ಇಬ್ಬರ ಬಂಧನ

crime sym

ದಾವಣಗೆರೆ

ಹರಿಹರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಮಚ್ಚು ಪ್ರದರ್ಶಿಸಿದ ಇಬ್ಬರ ಬಂಧನ

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಮಚ್ಚು ಪ್ರದರ್ಶಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾದ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.

ಜೈಭೀಮ್ ನಗರದ ನಯಾಜ್ ಅಹಮದ್ (21), ಮಹಮದ್ ನವಾಜ್‌ (19) ಬಂಧಿತ ಆರೋಪಿಗಳಾಗಿದ್ದಾರೆ. ಪರಾರಿಯಾದ ಇನ್ನೊಬ್ಬ ಆರೋಪಿ ಶೇರ್ ಅಲಿಗಾಗಿ ಪೊಲೀಸರು ಸರ್ಚ್‌ ಮಾಡುತ್ತಿದ್ದಾರೆ. ಹರಿಹರದ ಜೈಭೀಮ್ ನಗರದ ಗಣೇಶನ ಮೂರ್ತಿಯ ವಿಸರ್ಜನೆ ವೇಳೆ ಈ ಘಟನೆ‌ ನಡೆದಿದೆ.

ಮೆರವಣಿಗೆ ಸರ್ಕಲ್ ಬಳಿ ಬಂದಾಗ ಮೂವರು ಮಚ್ಚು ಎತ್ತಿ ತೋರಿಸಿದ್ದಾರೆ. ಇದು ಸಾರ್ವಜನಿಕ ನೆಮ್ಮದಿಗೆ ಭಂಗ ತಂದಿದ್ದಾರೆ ಎಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜಗದೀಶ ಎಂಬುವರು ನಗರ ಠಾಣೆಗೆ ನೀಡಿದ ದೂರು ನೀಡಿದ್ದರು. ‌ಈ ದೂರಿನ ಆಧಾರದ‌ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top