ದಾವಣಗೆರೆ ವಿಶ್ವ ತೆಂಗು ದಿನಾಚರಣೆ: ಆದಾಯ, ಆರೋಗ್ಯ, ಆನಂದ ಕೊಡುವ ಕಲ್ಪವೃಕ್ಷ : ಡಾ.ದೇವರಾಜ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತೆಂಗು, ನಾಡಿನ ಎಲ್ಲಾ ಜನರಿಗೆ ಅತ್ಯಂತ ಅಗತ್ಯ ಹಾಗೂ ಉಪಯುಕ್ತ ಬೆಳೆಯಾಗಿದೆ.ಮಾನವನಿಗೆ ಆದಾಯ, ಆರೋಗ್ಯ ಮತ್ತು ಆನಂದವನ್ನು ನೀಡುವ ವಿಶೇಷ ಕಲ್ಪವೃಕ್ಷವಾಗಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ದೇವರಾಜ ಟಿ.ಎನ್. ಅಭಿಪ್ರಾಯಪಟ್ಟರು.

 

ಉಜಪ್ಪ ವಡೆಯರಹಳ್ಳಿ ಗ್ರಾಮದಲ್ಲಿ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದವತಿಯಿಂದ ವಿಶ್ವ ತೆಂಗು ದಿನಾಚರಣೆ ಆಚರಿಸಲಾಯಿತು. ಗ್ರಾಮದ ಯುವಕ ಮಂಡಳಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ತೆಂಗು ದಿನಾಚರಣೆ 2009 ರಲ್ಲಿ ಆರಂಭಗೊಂಡ ಏಷ್ಯಾ-ಪೆಸಿಫಿಕ್ ತೆಂಗು ಸಂಸ್ಥೆ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ. ಇದರೊಂದಿಗೆ ತೆಂಗಿನ ಮೌಲ್ಯವರ್ಧನೆಯಿಂದ (ಕೊಬ್ಬರಿ ಎಣ್ಣೆ, ಮಿಠಾಯಿ ಮತ್ತು ವರ್ಜಿನ್ ಕೊಬ್ಬರಿ ಎಣ್ಣೆ) ಹೆಚ್ಚು ಆದಾಯಗಳಿಸಲು ರೈತ ಆಸಕ್ತ ಗುಂಪುಗಳು ಪ್ರಯತ್ನಿಸಬಹುದಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರೈತರ ಅಡಿಕೆ ಮತ್ತು ತೆಂಗಿನ ತೋಟಗಳಿಗೆ ನೀಡಿ ಅನೇಕ ಸಮಸ್ಯೆಗಳಿಗೆ ಪರಿಹಾರ ಮಾರ್ಗಗಳನ್ನು ಸೂಚಿಸಲಾಯಿತು.ಕೇಂದ್ರದ ತೋಟಗಾರಿಕೆ ತಜ್ಞ ಬಸವನಗೌಡ ಎಂ.ಜಿ ಹಾಗೂ ಸಸ್ಯ ಸಂರಕ್ಷಣಾ ತಜ್ಞ ಡಾ. ಅವಿನಾಶ್ ಟಿ.ಜಿ ರೈತರನ್ನು ಉದ್ದೇಶಿಸಿ ಸಲಹೆ ಸೂಚನೆಗಳನ್ನು ನೀಡಿದರು..

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *