ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲಾಗಿದ್ದು ಯಾಕೆ ಗೊತ್ತಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮಂಗಳೂರು: ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸವದಲ್ಲಿ  ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಘಟನೆಯನ್ನು ಮರುಸೃಷ್ಟಿಸಿದ ಆರೋಪದ ಹಿನ್ನೆಲೆ ಆರ್ ಎಸ್ ಎಸ್  ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಕೇಸ್ ದಾಖಲಿಸಲಾಗಿದೆ.

ಅಂದು ಮಸೀದಿ ಕೆಡವಿದ ಘಟನೆಯ ಮರುಸೃಷ್ಟಿ ದೃಶ್ಯಗಳು ಸಾಮಾಜಿ ಜಾಲ ತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಪರ- ವಿರೋಧ ಚರ್ಚೆ ಆಗುತ್ತಿರುವಾಗಲೇ,  ಮುಸ್ಲಿಂ ಸಂಘಟನೆಗಳು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಕಲ್ಲಡ್ಕ ವಿದ್ಯಾಕೇಂದ್ರದ ಮುಖ್ಯಸ್ಥ ಪ್ರಭಾಕರ ಭಟ್ ಸೇರಿ ವಿದ್ಯಾಸಂಸ್ಥೆಯ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಅಯೋಧ್ಯೆ ವಿವಾದ ಸುಪ್ರೀಂ ಕೋರ್ಟ್ ಮಹಾ ತೀರ್ಪಿನ ಸಂದರ್ಭದಲ್ಲಿ ಯಾವುದೇ ಪ್ರಚೋದನೆ ಆಗದಂತೆ  ಮಾಧ್ಯಮಗಳು ಸಂಯಮ ಕಾಪಾಡಿಕೊಳ್ಳಬೇಕು  ಎಂದು ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಆದೇಶ ಮಾಡಿತ್ತು. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸವದಲ್ಲಿ  ಬಾಬರಿ ಮಸೀದಿ ಕೆಡವಿದ್ದನ್ನು ಮರುಸೃಷ್ಟಿ ಮಾಡಿ ತೋರಿಸಲಾಗಿತ್ತು. ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ರಾಮಮಂದಿರ ಕುರಿತ ಸಾಕ್ಷ್ಯಚಿತ್ರದ ರೂಪದಲ್ಲಿ ಇಡೀ ಘಟನಾವಳಿಗಳನ್ನು ಮಕ್ಕಳ ಮೂಲಕ ಮಾಡಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಪಾಂಡಿಚೇರಿ ರಾಜ್ಯಪಾಲೆ ಕಿರಣ್ ಬೇಡಿ ಸೇರಿ ಪ್ರಮುಖರು ಸಾಕ್ಷಿಯಾಗಿದ್ದರು. ಇದೇ ವಿಚಾರ ಇದೀಗ ಮುಸ್ಲಿಂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿರುವ ಕಲ್ಲಡ್ಕ  ಪ್ರಭಾಕರ ಭಟ್, ಪ್ರತಿ ವರ್ಷವೂ ಆಯಾ ಸಾಲಿನ ವಿಶೇಷ ಘಟನೆಗಳ ಬಗ್ಗೆ ದೃಶ್ಯ ರೂಪಕ ತೋರಿಸುತ್ತೇವೆ. ಈ ಬಾರಿ ರಾಮ ಜನ್ಮಭೂಮಿ ತೀರ್ಪು ಪ್ರಮುಖ ವಿಚಾರವಾದ್ದರಿಂದ ಇಡೀ ಘಟನಾವಳಿಯನ್ನು ಚಿತ್ರಿಸಿದ್ದೇವೆ. ಅದರಲ್ಲಿ ಬಾಬರಿ ಮಸೀದಿ ಕೆಡವಿದ ಘಟನೆಯೂ ಒಂದು. ಆ ಬಗ್ಗೆ ಯಾವುದೇ ಸಮುದಾಯವನ್ನು ಅಪಮಾನಿಸುವ ಪ್ರಯತ್ನ ಮಾಡಿಲ್ಲ. ಬಾಬರ್ ಒಬ್ಬ ವಿದೇಶಿ ದಾಳಿಕೋರ, ಆತನ ಬಗ್ಗೆ ಹೇಳಿದ್ದಕ್ಕೆ ಮುಸ್ಲಿಮರಿಗೆ ಯಾಕೆ ನೋವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *