ದಾವಣಗೆರೆ: ಶಾಂತಿಸಾಗರದಿಂದ ಕಾಲುವೆಗೆ ನೀರು ಬಿಡುಗಡೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ಶಾಂತಿ ಸಾಗರ ಕೆರೆಯಲ್ಲಿ ಪ್ರಸಕ್ತ ವರ್ಷದ ಮಳೆಗಾಲದ ಹಂಗಾಮಿಗೆ ನೀರು ಹರಿಸಲು ಕುಡಿಯುವ ನೀರು 779 ಎಂಸಿಎಫ್‍ಟಿ ಹೊರತು ಪಡಿಸಿ ಅರೆ ನೀರಾವರಿ ಮತ್ತು ತೋಟದ ಬೆಳೆಗೆ ಮಳೆಗಾಲದ ಹಂಗಾಮಿಗೆ ಅವಶ್ಯವಿರುವ 1003 ಎಂಸಿಎಫ್‍ಟಿ ಕೆರೆಯಲ್ಲಿ ನೀರಿನ ಲಭ್ಯತೆಯಿರುವುದರಿಂದ ನವೆಂಬರ್ 05 ರವರೆಗೆ ಸಿದ್ದನಾಲಾ-60ಕ್ಯೂಸೆಕ್ಸ್ ಮತ್ತು ಬಸವನಾಲಾ-45 ಕ್ಯೂಸೆಕ್ಸ್‍ನಂತೆ ನಿರಂತರವಾಗಿ ನೀರನ್ನು ಅರೆ ನೀರಾವರಿ ಬೆಳೆಗಳನ್ನು ಬೆಳೆಯಲು ಮಾತ್ರ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ.

ಪ್ರಸಕ್ತ ಮಳೆಗಾಲದ ಹಂಗಾಮಿನಲ್ಲಿ ರೈತ ಬಾಂಧವರು ಹೆಚ್ಚು ನೀರುಣ್ಣುವ ಬೆಳೆಯಾದ ಭತ್ತವನ್ನು ಬೆಳೆಯದೇ, ಅರೆ ನೀರಾವರಿ ಬೆಳೆಯನ್ನು ಮಾತ್ರ ಬೆಳೆಯಲು ಸೂಚಿಸಲಾಗಿದೆ. ಬೆಳೆ ಮಾದರಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಹಾಗೂ ಕಟ್ಟಡಗಳನ್ನು ಜಖಂಗೊಳಿಸುವವರು, ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಅನಧಿಕೃತ ನೀರಾವರಿ ಬೆಳೆಗಾರರು ಕರ್ನಾಟಕ ನೀರಾವರಿ ಕಾಯ್ದೆ 1965ರ ವಿವಿಧ ನಿಯಮಗಳ ಪ್ರಕಾರ ಕಾನೂನು ಕ್ರಮಕ್ಕೆ ಒಳಗಾಗುತ್ತಾರೆ. ರೈತರು ಸಹಕರಿಸಬೇಕೆಂದು ಭದ್ರಾ ನಾಲಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *