ದಾವಣಗೆರೆ: ರಾಮಕೃಷ್ಣ ಹೆಗಡೆ ನಗರದ ನಿವಾಸಿಗಳಿಗೆ ಪರ್ಯಾಯ ನಿವೇಶನ; ರಿಂಗ್‍ ರೋಡ್ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಬಹು ದಿನಗಳಿಂದ ಬಾಕಿ ಉಳಿದಿರುವ ರಿಂಗ್‍ರೋಡ್ ಕಾಮಗಾರಿಗೆ ಸಂಬಂಧಿಸಿದಂತೆ ರಾಮಕೃಷ್ಣ ಹೆಗಡೆ ನಗರದ ಗುಡಿಸಲು ನಿವಾಸಿಗಳಿಗೆ ಪರ್ಯಾಯ ನಿವೇಶನ ನೀಡಿ ರಾಷ್ಟ್ರೀಯ ಹೆದ್ದಾರಿ ಶಾಮನೂರು ರಸ್ತೆಯಿಂದ ಸಂಗೊಳ್ಳಿರಾಯಣ್ಣ ವೃತ್ತ, ರೈಲ್ವೇ ಮೇಲುಸೇತುವೆ ಮಾರ್ಗವಾಗಿ ಅಕ್ತರ್ ರಜ್ಹಾ ವೃತ್ತದಿಂದ ಮಾಗನಹಳ್ಳಿ ರಸ್ತೆ ಸಂಪರ್ಕಿಸುವ ರಿಂಗ್‍ರೋಡ್ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಲೋಕಸಭಾ ಸದಸ್ಯರಾದ ಡಾ. ಜಿ.ಎಂ ಸಿದ್ದೇಶ್ವರ ಹೇಳಿದರು.

ಮಂಗಳವಾರ ನಗರದ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸ್ಮಾರ್ಟ್‌ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಕ್ತರ್ ರಜ್ಹಾ ಸರ್ಕಲ್‍ನಿಂದ ಮಾಗನಹಳ್ಳಿ ರಸ್ತೆವರೆಗೆ ಬಾಕಿ ಉಳಿದಿರುವ ರಿಂಗ್‍ರೋಡ್ ಕಾಮಗಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿ ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ರಾಮಕೃಷ್ಣ ಹೆಗಡೆ ನಗರದ 350 ಗುಡಿಸಲು ನಿವಾಸಿಗಳಿಗೆ ಬೇರೆಡೆ ಸೂಕ್ತ ಸ್ಥಳ ಗುರುತಿಸಿ, ಹಕ್ಕುಪತ್ರ ನೀಡಿ ಜಾಗ ತೆರೆವುಗೊಳಿಸಿ ಕೆಲಸವನ್ನು ಪ್ರಾರಂಭಿಸಿ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ರಾಜನಹಳ್ಳಿಯ ಬಳಿ ತುಂಗಭದ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಬ್ಯಾರೇಜ್ ಕಾಮಗಾರಿಯನ್ನು ನದಿ ನೀರು ಹರಿವಿಕೆಯ ಪ್ರಮಾಣ ಕಡಿಮೆಯಾದ ನಂತರ ಕೈಗೆತ್ತಿಕೊಂಡು ಏಪ್ರಿಲ್ ಒಳಗಾಗಿ ಪೂರ್ಣಗೊಳಿಸಬೇಕು. ಸ್ಮಾರ್ಟ್‍ಸಿಟಿ ಯೋಜನೆ ಅಡಿಯಲ್ಲಿ ವಿವಿಧಡೆ ಕೈಗೊಂಡಿರುವ ಶಾಲಾ ಕಟ್ಟಡ, ಕೆಎಸ್‍ಆರ್‍ಟಿಸಿ ಮತ್ತು ಬೇತೂರು ಬಸ್ ಸ್ಟ್ಯಾಂಡ್, ರಸ್ತೆ ಕಾಮಗಾರಿಗಳನ್ನು ದಿಶಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರೀಕ್ಷಿಸಬೇಕು. ವಿಶೇಷವಾಗಿ ಯರಗುಂಟೆ ಹಾಗೂ ಬಸಾಪುರಗಳಲ್ಲಿ ನಿರ್ಮಿಸಿರುವ ಶಾಲಾ ಕೊಠಡಿಗಳ ಕುರಿತಂತೆ ದೂರುಗಳಿದ್ದು, ಖುದ್ದಾಗಿ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಬಸಾಪುರ ಶಾಲೆಯ ಶೌಚಾಲಯ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸ್ಮಾರ್ಟ್‍ಸಿಟಿ ಯೋಜನೆಯಡಿ 110 ಕಾಮಗಾರಿಗಳು ಹಾಗೂ ಪಿಪಿಪಿ ಮಾದರಿಯ 5 ಕಾಮಗಾರಿಗಳು ಸೇರಿ ಒಟ್ಟು 115 ಕಾಮಗಾರಿಗಳು ನಡೆಯುತ್ತಿವೆ. ಇದರ ಯೋಜನಾ ವೆಚ್ಚ 1073.83 ಕೋಟಿಗಳಾಗಿದ್ದು ಈಗಾಗಲೇ 678.99 ಕೋಟಿಯನ್ನು ವೆಚ್ಚ ಮಾಡಲಾಗಿದೆ.

ಒಟ್ಟು ಕಾಮಗಾರಿಗಳಲ್ಲಿ 62 ಕಾಮಗಾರಿಗಳು ಪೂರ್ಣವಾಗಿ ರೂ.200.59 ಕೋಟಿ ಪಾವತಿಸಲಾಗಿದೆ. 13 ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಂಡಿದ್ದು ಅಂತಿಮ ಹಂತದ ಬಿಲ್ಲು ಸೇರಿ 118.14 ಕೋಟಿ ಪಾತಿಸಲಾಗಿದೆ. 40 ಕಾಮಗಾರಿಗಳು ಮಾತ್ರ ಪ್ರಗತಿಯಲ್ಲಿರುತ್ತವೆ ಎಂದು ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿಇಒ ಡಾ.ಎ.ಚನ್ನಪ್ಪ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಸೇರಿದಂತೆ ದಿಶಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *