ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಾವಣಗೆರೆ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಚಿಗಟೇರಿ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಅಕ್ಟೋಬರ್ 01 ರಂದು ಆಚರಿಸುವ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2022 ಅಂಗವಾಗಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 01 ರ ವರೆಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ರಕ್ತದಾನಿಗಳು ಸ್ವಯಂ ಪ್ರೇರಿತವಾಗಿ ನೋಂದಾಯಿತ ರಕ್ತದಾನ ಶಿಬಿರಗಳಲ್ಲಿ ರಕ್ತ ಭಂಡಾರ, ಚಿಗಟೇರಿ ಜಿಲ್ಲಾಸ್ಪತ್ರೆ, ನಗರದ ವಿವಿಧ ಖಾಸಗಿ ರಕ್ತಕೇಂದ್ರಗಳಲ್ಲಿ ತಮ್ಮ ಅಮೂಲ್ಯ ರಕ್ತವನ್ನು ದಾನ ಮಾಡಬಹುದಾಗಿದೆ ಎಂದು ಚಿಗಟೇರಿ ಜಿಲ್ಲಾಸ್ಪತ್ರೆಯ ಡಾ.ಕೆ.ಹೆಚ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 17 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ದೇಶದಾದ್ಯಂತ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದು, ಅಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಶಾಖೆಯ ವತಿಯಿಂದ ಸೆ.17 ರಿಂದ ಅ.01 ರವರೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಸಾರ್ವನಿಕರು, ರಕ್ತದಾನಿಗಳು ಸಕ್ರೀಯವಾಗಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸುವಂತೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಾವಣಗೆರೆ ಜಿಲ್ಲಾ ಶಾಖೆಯ ಮುಖ್ಯಸ್ಥ ಗೌಡ್ರು ಚನ್ನಬಸಪ್ಪ ರವರು ಪ್ರಕಟಣೆ ತಿಳಿಸಿದ್ದಾರೆ.



