ದಾವಣಗೆರೆ: ರೈಲ್ವೆ ನಿಲ್ದಾಣಗಳಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಜಿ.ಎಂ. ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರೈಲ್ವೆ ಇಲಾಖೆ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸಂಸದ ಜಿ.ಎಂ.‌ಸಿದ್ದೇಶ್ವರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ ವೋಕಲ್ ಫಾರ್ ಲೋಕಲ್ ಘೋಷಣೆಯಂತೆ ಈ ಯೋಜನೆ ಜಾರಿಗೆ ತರಲಾಗಿದೆ.ದುರ್ಬಲ ವರ್ಗದ ಜನರಿಗೆ ಹೆಚ್ಚುವರಿ ಆದಾಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕರಕುಶಲ, ಕೈಮಗ್ಗ, ಕೃಷಿ, ಖಾದಿ, ಸಂಸ್ಕರಿಸಿದ ಆಹಾರ ಉತ್ಪನ್ನ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ದೇಶದ 750 ರೈಲ್ವೆ ನಿಲ್ದಾಣಗಳಲ್ಲಿ ಈ ಯೋಜನೆ ಜಾರಿಗೆ‌ ತರಲಾಗಿದೆ. ರಾಜ್ಯದ ಮೈಸೂರು ವಿಭಾಗದ 10 ನಿಲ್ದಾಣಗಳಲ್ಲಿ ದಾವಣಗೆರೆ ನಿಲ್ದಾಣವೂ ಆಯ್ಕೆ ಆಗಿದೆ. ಅಕ್ಟೋಬರ್ 2ನೇ ವಾರದಿಂದ ಈ ಯೋಜನೆ ಜಾರಿ ಆಗಲಿದೆ. ಕನಿಷ್ಟ 15 ದಿನದಿಂದ ಗರಿಷ್ಠ 30 ದಿನ ಮಳಿಗೆಗಳಲ್ಲಿ ಉತ್ಪನ್ನ ಮಾರಾಟ ಮಾಡಬಹುದು. ಇದಕ್ಕಾಗಿ ನೋಂದಣಿ ಶುಲ್ಕ‌ 1000 ಹಾಗೂ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *