ದಾವಣಗೆರೆ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 1.46 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಜಗಳೂರು ತಾಲ್ಲೂಕಿನ ಅಂಜಿನಪ್ಪ (24) ಬಂಧಿತ ಆರೋಪಿಯಾಗಿದ್ದು, ಮಾಡಿದ್ದು, ಈ ಪ್ರಕರಣದಲ್ಲಿ ಒಟ್ಟು ಅಂದಾಜು 1,46,೦೦೦/- ರೂ ಬೆಲೆ ಬಾಳುವ ಬಂಗಾರ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದ ಕೊಲ್ಲಪ್ಪ ಎಂಬುವರು 21-೦9-2022 ರಂದು ರಾತ್ರಿ 7-೦೦ ಗಂಟೆಯಿಂದ ಬೆಳಿಗ್ಗೆ 6-೦೦ ಗಂಟೆಯ ಅವಧಿಯಲ್ಲಿ ನಾವು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮಕೈಗೊಳ್ಳಿ ಅಂತಾನೀಡಿದ ದೂರಿನ ಮೇರೆಗೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಮೇಲ್ಕಂಡ ಪ್ರಕರಣದ ಆರೋಪಿತರ ಹಾಗೂ ಸ್ವತ್ತು ಪತ್ತೆಗಾಗಿ ಡಿವೈಎಸ್ಪಿ ಕನ್ನಿಕಾ ಸಿಕ್ರಿವಾಲ್ ಮಾರ್ಗದರ್ಶನದಲ್ಲಿ ಬಿಳಿಚೋಡು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸತ್ಯನಾರಾಯಣಸ್ವಾಮಿ ಕೆ ಹಾಗೂ ಸಿಬ್ಬಂದಿಗಳ ತಂಡ ಪತ್ತೆಕಾರ್ಯ ಕೈಗೊಂಡಿದ್ದು, ದಿನಾಂಕ-25-೦9-2022 ರಂದು ಪ್ರಕರಣದಲ್ಲಿನ ಆರೋಪಿತನಾದ ಅಂಜಿನಪ್ಪ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ಪತ್ತೆಯಲ್ಲಿ ಪಿಎಸ್ಐ ಮಂಜುನಾಥ ಎಸ್ ಕಲ್ಲದೇವರ ಹಾಗೂ ಸಿಬ್ಬಂದಿಗಳಾದ ಮಹಮ್ಮದ್ ಜಬೀವುಲ್ಲ, ಸಿದ್ದಪ್ಪ, ಬಿ.ಹೆಚ್.ಹನುಮಂತಪ್ಪ, ಗಣೇಶಗುಬ್ಬಿ, ಕರಿಬಸವರಾಜ ಭಾಗವಹಿಸಿರುತ್ತಾರೆ. ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ರವರು ಶ್ಲಾಘಿಸಿದ್ದಾರೆ.



