ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ದಸರಾ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ. ತುಟ್ಟಿಭತ್ಯೆಯನ್ನು ಶೇ.34 ರಿಂದ ಶೇ.38 ಕ್ಕೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ಶೇ.4 ಹೆಚ್ಚಳವಾದಂತಾಗಿದೆ.
ಈ ಸೌಲಭ್ಯ ಕೇಂದ್ರ ಸರ್ಕಾರದ 50 ಲಕ್ಷಕ್ಕೂ ಅಧಿಕ ನೌಕರರು ಹಾಗೂ 62 ಲಕ್ಷ ಪಿಂಚಣಿದಾರರಿಗೆ ಲಭ್ಯವಾಗಲಿದೆ.ಕೇಂದ್ರ ಸರ್ಕಾರಿ ನೌಕರರಿಗೆ ವರ್ಷಕ್ಕೆ ಎರಡು ಬಾರಿ ಅಥವಾ ಆರು ತಿಂಗಳಿಗೊಮ್ಮೆ ಡಿಎ ಹೆಚ್ಚಳ ಮಾಡಲಾಗುತ್ತದೆ. ಆದರೆ ಕಳೆದ ಹಲವು ತಿಂಗಳುಗಳಿಂದಲೂ ಈ ಹೆಚ್ಚಳ ಮಾಡಲಾಗಿರಲಿಲ್ಲ.
ಇವತ್ತು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಡಿಎ ಹೆಚ್ಚಳ ಕುರಿತಂತೆ ತೀರ್ಮಾನ ಕೈಗೊಳ್ಳಲಾಗಿದೆ. ಇದಲ್ಲದೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನೂ ಸಹ ಮತ್ತೆ ಮೂರು ತಿಂಗಳ ಕಾಲ ಮುಂದುವರೆಲಾಗಿದೆ.



