ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ದೇಶಾದ್ಯಂತ ನಡೆಯುತ್ತಿದ್ದ ಪ್ರತಿಭಟನೆ ರಾಜ್ಯಕ್ಕೂ ವ್ಯಾಪಿಸಿದೆ. ಬೆಂಗಳೂರು ನಗರದ ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಸಲು ಮುಂದಾದ ಗುಂಪು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪ್ರತಿಭಟನೆ ನಡೆಸುತ್ತಿದ್ದವರನ್ನು ವಶಕ್ಕೆ ಪಡೆಯಲಾಗುತ್ತಿದೆ.

ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಈ ವೇಳೆ ಬಿಎಂಟಿಸಿ ಬಸ್ಸಿಗೆ ಪ್ರತಿಭಟನಾಕಾರರು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕರಪತ್ರ ಹಂಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಆದರೂ ಸಹ ಪ್ರತಿಭಟನಕಾರರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಪೊಲೀಸ್ ವಾಹನ, ಬಿಎಂಟಿಸಿ ಬಸ್, ಖಾಸಗಿ ವಾಹನ ಬಳಸಿ ಪ್ರತಿಭಟನಾಕಾರರನ್ನು ಸಾಗಿಸಲಾಗುತ್ತಿದೆ. ಇತಿಹಾರ ಬರಹಗಾರ ರಾಮಚಂದ್ರ ಗುಹಾ, ಚಳವಳಿಗಾರ ವಾಟಳ್ ನಾಗರಾಜ್ ಸೇರಿದಂತೆ ಅನೇಕರನ್ನು ಬಂಧಿಸಲಾಯಿತು.
#WATCH Karnataka: Police detained historian Ramachandra Guha during protest at Town Hall in Bengaluru, earlier today. #CitizenshipAct https://t.co/8jrDjtsOfm pic.twitter.com/P8csG0x9HN
— ANI (@ANI) December 19, 2019
ಶಾಂತವಾಗಿರಿ ಕಾಪಡಲು ಸಿಎಂ ಯಡಿಯೂರಪ್ಪ ಕರೆ
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ರಾಜಕೀಯ ಪಕ್ಷಗಳು, ಮುಖಂಡರಿಗೆ ಮತ್ತು ನಾಗರಿಕರು ಶಾಂತವಾಗಿ ಇರಬೇಕು. ಈ ಕಾಯ್ದೆಯಿಂದ ದೇಶದಲ್ಲಿರುವ ಜನರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದು ಅನ್ವಯವಾಗುವುದು ಬೇರೆ ದೇಶಗಳಿಂದ ಬಂದು ಇಲ್ಲಿ ನೆಲೆಸಿರುವವರಿಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
Karnataka CM: Congress is behind protests against CAA, &because of people like UT Khader situation is becoming like this. Taking care of Muslims is our responsibility. Request all to maintain peace. If Congress leaders continue to support protests then they'll face consequences. pic.twitter.com/jx8obOtNIw
— ANI (@ANI) December 19, 2019
ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಪ್ರತಿಭಟನೆ ಸ್ಥಳಗಳಾದ ಟೌನ್ ಹಾಲ್, ಮೈಸೂರು ಬ್ಯಾಂಕ್ ವೃತ್ತದ ಬಳಿ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಕೇಂದ್ರ ವಿಭಾಗಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕಷ್ಟು ಅರ್ಜಿ ಬಂದಿತ್ತು. ಇದನ್ನು ಆಧರಿಸಿಯೇ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದನ್ನು ತಪ್ಪಿ ನಡೆದರೆ ಸೂಕ್ತ ಕ್ರಮಕ್ಕೆ ಪೋಲಿಸರು ಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.



