ದಾವಣಗೆರೆ: ಅ.9ರಂದು ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸಂಯುಕ್ತಾಶ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 9 ರ ಭಾನುವಾರ ಬೆಳಿಗ್ಗೆ 12 ಗಂಟೆಗೆ ಎಂ.ಸಿ.ಸಿ ಬಿ ಬ್ಲಾಕ್‍ನಲ್ಲಿರುವ ಶ್ರೀ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆವಹಿಸುವರು.
ಲೋಕಸಭಾ ಸದಸ್ಯರಾದ ಡಾ.ಜಿ.ಎಂ.ಸಿದ್ದೇಶ್ವರ, ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಶಾಸಕ ಎಂ.ಪಿ.ರೇಣುಕಾಚಾರ್ಯ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಗೌರವಾನ್ವಿತ ಉಪಸ್ಥಿತರಾಗಿ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನಸಭಾ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ, ಮಹಾನಗರ ಪಾಲಿಕೆ ಮಹಾಪೌರರಾದ ಆರ್ ಜಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಕೆ.ಎಂ.ಸುರೇಶ್ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಅರ್ಜುನ.ಯ.ಪಂಗಣ್ಣವರ ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ.ಮುದ್ದಜ್ಜಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ದಾವಣಗೆರೆ ಜಿಲ್ಲೆ ನೋಡಲ್ ಅಧಿಕಾರಿಗಳಾದ ಕವಿತಾ ವಾರಂಗಲ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಮಂಜನಾಯ್ಕ್ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *