ದಾವಣಗೆರೆ: ರಾತ್ರೋರಾತ್ರಿ ಅಡಿಕೆ ತೋಟದಲ್ಲಿ 10 ಕ್ವಿಂಟಾಲ್ ಹಸಿ ಅಡಿಕೆ ಕಳವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:ಇಬ್ಬರು ರೈತರ ತೋಟಗಳಲ್ಲಿ ರಾತ್ರೋರಾತ್ರಿ 10 ಕ್ವಿಂಟಾಲ್‌ಗಿಂತಲೂ ಅಧಿಕ  ಹಸಿ ಅಡಿಕೆ ಕಳವು ಮಾಡಿದ ಘಟನೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ.

ಮಾಯಕೊಂಡ ಗ್ರಾಮದ ಪ್ರಭು ಮತ್ತು ಲೋಕೇಶ್‌ ಎಂಬ ರೈತರ ಅಡಿಕೆ ತೋಟಗಳಿಗೆ ಅಡಿಕೆ ಕಳ್ಳರು ಕೈಚಳಕ ತೋರಿದ್ದು, 10 ಕ್ವಿಂಟಲ್‌ಗಿಂತಲೂ ಅಧಿಕ ಅಡಿಕೆ ಕಳವು ಮಾಡಿದ್ದಾರೆ. 350ಕ್ಕೂ ಹೆಚ್ಚು ಅಡಿಕೆ ಮರಗಳಲ್ಲಿ 10 ಕ್ವಿಂಟಲ್‌ಗೂ ಅಧಿಕ ಅಡಿಕೆ ಕಳವು ಮಾಡಿದ್ದಾರೆ.

ಮರಗಳಲ್ಲಿದ್ದ ಅಡಿಕೆ ಕೊಯ್ದು, ಅಡಿಕೆ ಬೇರ್ಪಡಿಸಿರುವ ಕಳ್ಳರು, ಅಡಿಕೆ ಕುಂಚಗಳನ್ನು ಅಕ್ಕಪಕ್ಕದ ಹೊಲಗಳಲ್ಲಿ ಬಿಸಾಡಿ ಹೋಗಿದ್ದಾರೆ. ಬೆಳಿಗ್ಗೆ ರೈತ ಪ್ರಭು, ಲೋಕೇಶ ತೋಟಕ್ಕೆ ಬಂದಾಗ ಅಡಿಕೆ ಕಳುವು ಮಾಡಿರುವ ವಿಚಾರ ಇಡೀ ಊರಿನವರಿಗೆ ಗೊತ್ತಾಗಿದೆ. ಈ ಬಗ್ಗೆ ಇಬ್ಬರೂ ಅಡಿಕೆ ಬೆಳೆಗಾರರು ಮಾಯಕೊಂಡ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಅಡಿಕೆ ಕಳವು ತಡೆಗೆ ದಾವಣಗೆರೆ ತಾಲೂಕಿನಲ್ಲಿ ಈಚೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ರೈತರೊಂದಿಗೆ ಸಭೆ ನಡೆಸಿ, ಸಾಕಷ್ಟುಎಚ್ಚರಿಕೆ ಕ್ರಮಗಳ ಬಗ್ಗೆ ಸೂಚಿಸಿದ್ದರೂ, ಕಳ್ಳತನ ನಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *