ದಾವಣಗೆರೆ; 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಗೆ “ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕವಾಗಿದೆ.
ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೆÇೀರ್ಟಲ್ನ ವೆಬ್ಸೈಟ್ https://sevasindhu.karnataka.gov.in ಮೂಲಕ ಅರ್ಜಿ ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ನ.15 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-250022 ಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



