ದಾವಣಗೆರೆ: ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ವೀಕ್ಷಿಸಿದ ಜಿಲ್ಲಾ ಪೊಲೀಸರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಿರ್ದೇಶಕ, ನಟ ರಿಷಬ್‌ ಶೆಟ್ಟಿ ಅವರ ಕಾಂತಾರ ಕನ್ನಡ ಸಿನಿಮಾ ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಕಾಂತಾರ ಸಿನಿಮಾ ಎಲ್ಲ ಜನವರ್ಗವನ್ನೂ ಆಕರ್ಷಿಸುತ್ತಿದೆ. ಜನ ಕುಟುಂಬ ಸಮೇತರಾಗಿ ಸಿನಿಮಾ ನೋಡುತ್ತಿದ್ದಾರೆ. ಇದೀಗ ದಾವಣಗೆರೆ ಜಿಲ್ಲಾ ಪೊಲೀಸರು ಸಹ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ.

ನಗರದ ಗೀತಾಂಜಲಿ ಚಿತ್ರಮಂದಿರದಲ್ಲಿ ಇಡೀ ಥಿಯೇಟರ್‌ನ ಒಂದು ಶೋವನ್ನು ಪೊಲೀಸರು ಬುಕ್‌ ಮಾಡಿ ಚಲನಚಿತ್ರ ವೀಕ್ಷಿಸಿದ್ದಾರೆ. ಅದರಲ್ಲೂ ಎಸ್‌ಪಿ ಸಿ.ಬಿ ರಿಷ್ಯಂತ್‌ ಅವರೇ ಕುಟುಂಬ ಸಮೇತ ಚಿತ್ರ ನೋಡಲು ಬಂದಿದ್ದು ವಿಶೇಷವಾಗಿತ್ತು. ಎಎಸ್‌ಪಿ, ಡಿವೈಎಸ್‌ಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ಪೆಕ್ಟರ್‌ ಸೇರಿ ಎಲ್ಲರೂ ಬಂದಿದ್ದರು.ಪೊಲೀಸರು ಒತ್ತಡದ‌ ನಡುವೆಯೂ ಬಿಡುವು ಮಾಡಿಕೊಂಡು ಫ್ಯಾಮಿಲಿ ಜತೆಯಾಗಿ ಸಿನಿಮಾ ನೋಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *