ದಾವಣಗೆರೆ: ಕರ್ನಾಟಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 13 ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಯು ಮಾಜಿ ಸೈನಿಕರಿಗೆ ಮಾತ್ರ ಮೀಸಲಾಗಿದ್ದು, ಪಿಯುಸಿ ಅಥವಾ ತತ್ಸಮಾನ ಮಾನ್ಯತೆ ಪಡೆದ ಪದವಿ ಪೂರ್ವ ಕಾಲೇಜುಗಳಿಂದ ಪಡೆದಿರಬೇಕು.
10ನೇ ತರಗತಿ ಉತ್ತೀರ್ಣಗೊಂಡು ಸೇನೆಯಲ್ಲಿ 15 ವರ್ಷಗಳಿಗೆ ಕಡಿಮೆಯಿಲ್ಲದೇ ಸೇವೆ ಸಲ್ಲಿಸಿ, ಪಡೆದ ಪದವಿ ಪ್ರಮಾಣ ಪತ್ರ ಹೊಂದಿರಬೇಕು.
ಆಸಕ್ತರು ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೇವಾಪುಸ್ತಕ, ಗುರುತಿನ ಚೀಟಿ, ವಿದ್ಯಾರ್ಹತೆ ದಾಖಲೆಗಳು, ಮೀಸಲಾತಿ ಸಂಬಂಧಿತ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ನವೆಂಬರ್ 7 ರೊಳಗಾಗಿ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರ 560025 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪತ್ರದ ದಿ: 18 ಅಕ್ಟೋಬರ್ 2022ರ ಸಂಪುಟ 157 ಸಂಚಿಕೆ 210 ನ್ನು ಅನುಸರಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರಭಾರ) ತಿಳಿಸಿದ್ದಾರೆ.



