Connect with us

Dvgsuddi Kannada | online news portal | Kannada news online

ದಾವಣಗೆರೆ: 5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಕೇವಲ 8 ಗಂಟೆಯಲ್ಲಿ ಆರೋಪಿ ಪತ್ತೆ

IMG 20221029 WA0005

ದಾವಣಗೆರೆ

ದಾವಣಗೆರೆ: 5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಕೇವಲ 8 ಗಂಟೆಯಲ್ಲಿ ಆರೋಪಿ ಪತ್ತೆ

ದಾವಣಗೆರೆ: ನಗರದ ದೇವರಾಜ್ ಅರಸ್ ಬಡಾವಣೆಯ ‘ಸಿ’ ಬ್ಲಾಕ್ ಮನೆಯೊಂದರಲ್ಲಿ ಇಂಟರ್ ಲಾಕ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ, 8 ಸಾವಿರ ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಕೇವಲ 8 ಗಂಟೆಯಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಅ.28 ರಂದು ಬೆಳಗ್ಗೆ ದೇವರಾಜ್ ಅರಸ್ ಬಡಾವಣೆಯ ಸಿ ಬ್ಲಾಕ್ ನ ಶಾಂತಕುಮಾರ್ ಅವರು, ನಮ್ಮ ಮನೆಯ ಅಲ್ಮೇರಾ ಇಂಟರ್ ಲಾಕ್ ತೆಗೆದು ಅದರಲ್ಲಿದ್ದ 5,13000 ರೂ. ಮೌಲ್ಯದ 125 ಗ್ರಾಂ ಬಂಗಾರ, 8 ಸಾವಿರ ನಗದು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಆರೋಪಿಯನ್ನು ಡಿವೈಎಸ್ಪಿ ಬಸವರಾಜ್ ಬಿ.ಎಸ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ಗುರುಬಸವರಾಜ್ ನೇತೃತ್ವದ ತಂಡ ಕೇವಲ 8 ಗಂಟೆಯಲ್ಲಿ ಬಂಧಿಸಲಾಗಿದೆ. ಆರೋಪಿ ಆಟೋ ಚಾಲಕ ಅವಿನಾಶ್ (30) ಬಂಧಿಸಲಾಗಿದೆ.

ಆರೋಪಿಯಿಂದ 110 ಗ್ರಾಂ ಚಿನ್ನ, 33 ಗ್ರಾಂ ಬೆಳ್ಳಿ ಹಾಗೂ 2, 910 ನಗದು ವಶಕ್ಕೆ ಪಡೆಯಲಾಗಿದೆ. ಈ ಆರೋಪಿ ಈ ಹಿಂದೆ ಬೆಂಗಳೂರು ನಗರದಲ್ಲಿ ಪ್ರಕರಣವೊಂದು ದಾಖಲಾದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆರೋಪಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಎಸ್ ಪಿ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top